ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಹಲವರ ಮನವಿ

ಸಚಿವ ಕೆ.ಎಸ್. ಈಶ್ವರಪ್ಪ ಮನವಿ: 
ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಪ್ರಧಾನಿವರೆಗೆ ತಲುಪಿದ್ದು, ನಗರದಲ್ಲಿ ಶಾಂತಿ ಕಾಪಾಡುವಂತೆ ಮೋದಿ ಅವರು ವಿನಂತಿಸಿದ್ದಾರೆ ಎಂದು ತಿಳಿಸಿದರು.
ನಗರದಲ್ಲಿ ಶಾಂತಿ ಕಾಪಾಡಿ ಕಾನೂನು ಸುವ್ಯವಸ್ಥೆ ನಿಯಂತ್ರಿಸುವಂತೆ ಪ್ರಧಾನಿ ಸೂಚಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಭೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಶಾಂತಿ ಕಾಪಾಡಲು ವಿನಂತಿಸಿದ್ದಾರೆ. ಪ್ರಧಾನಿ ಮತ್ತು ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಡಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ನಾಗರಿಕರು ಮತ್ತು ಯುವಕರು ಯಾವುದೇ ಭಾವೋದ್ವೇಗಕ್ಕೆ ಒಳಗಾಗದೇ ಶಾಂತಿ ಕಾಪಾಡಲು ಸಹಕಾರ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ಸಂಸದ ಬಿ.ವೈ.ರಾಘವೇಂದ್ರ ಮನವಿ

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಅವರ ಕೊಲೆಗೆ ಕಾರಣಕರ್ತರಾದ ಅಪರಾಧಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಶಿವಮೊಗ್ಗದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 144 ಸೆಕ್ಷನ್ ಅನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಸಹಕರಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.

ಸ್ವರಾಜ್ ಇಂಡಿಯಾ:
ನಿನ್ನೆ ರಾತ್ರಿ ಶಿವಮೊಗ್ಗದಲ್ಲಿ ನಡೆದಿರುವ ಹತ್ಯೆ ಅಮಾನವೀಯವಾಗಿದ್ದು, ಇದನ್ನು ಒಕ್ಕೊರಲಿನಿಂದ ಖಂಡಿಸುವುದಾಗಿ ಸ್ವರಾಜ್ ಇಂಡಿಯಾ ಜಿಲ್ಲಾ ವಕ್ತಾರ ಕೆ.ಪಿ. ಶ್ರೀಪಾಲ್ ಹೇಳಿದ್ದಾರೆ.
ಏನೆ ಕಾರಣಗಳಿರಬಹುದು, ಅದನ್ನು ಹತ್ಯೆಯ ಮೂಲಕವೇ ಪ್ರತಿಕಾರ ನೀಡಬೇಕಾದ ಮನೋ ಪ್ರವೃತ್ತಿ ಮಾನವ ಸಮಾಜಕ್ಕೆ ಅಪಾಯಕಾರಿ ಬೆಳವಣಿಗೆ. ಇನ್ನೂ ಬದುಕನ್ನು ಕಟ್ಟಿ ಕೊಳ್ಳಬೇಕಿದ್ದ  ಯುವಕರು,  ಕುಟುಂbವನ್ನು  ನಿರ್ವಹಣೆ ಮಾಡಬೇಕಿದ್ದ ಹುಡುಗರ ಸಾವು ಇಡಿ ಕುಟುಂಬದ ಬೆಳಕನ್ನು  ಆರಿಸಿದೆ. ಈ ಕೃತ್ಯವನ್ನು  ಯಾರೆ ಮಾಡಿರಲಿ, ಅವರಿಗೆ ಕಠಿಣ ಶಿಕ್ಷಯಾಗಬೇಕು, ಇಂತಹ ಘಟನೆಗಳ  ಹಿಂದಿರುವ ವ್ಯಕ್ತಿಗಳು  ಸಂಘಟನೆ ಯಾರೆ ಇದ್ದರೂ ಅವರ ಮೇಲೆ  ಕಠಿಣ ಕ್ರಮ ಜರುಗಿಸುವುದರ ಮೂಲಕ ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಯಿಸಬೇಕು ಮತ್ತು  ಹತ್ಯೆಗೀಡದ ಯುವಕನ ಕುಟುಂಬಕ್ಕೆ  ಸೂಕ್ತ ಪರಿಹಾರ  ನೀಡಬೇಕೆಂದು  ಒತ್ತಾಯಿಸಿದ್ದಾರೆ.

ಎಸ್.ಡಿ.ಪಿ.ಐ.
ಶಿವಮೊಗ್ಗ ನಗರದಲ್ಲಿ ನಿನ್ನೆ ನಡೆದ ಕೊಲೆ ಹಾಗೂ ಗಲಭೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಶಿವಮೊಗ್ಗ ಜಿಲ್ಲಾ ಸಮಿತಿ ಖಂಡಿಸಿದ್ದು, ಶಿವಮೊಗ್ಗ ನಗರದ ಜನತೆ ಶಾಂತಿ ಕಾಪಾಡುವಂತೆ ಮನವಿ ಮಾಡಿದೆ.

ಜಿಲ್ಲಾ ಕಾಂಗ್ರೆಸ್:
ಕಳೆದ ರಾತ್ರಿ ಹರ್ಷ ಎಂಬ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಈ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ಖಂಡಿಸಿದೆ. ಈ ದುಷ್ಕೃತ್ಯ ಎಸಗಿದ ಆರೋಪಿಗಳನ್ನು ಆದಷ್ಟು ಬೇಗ ಪತ್ತೆ ಹಚ್ಚಬೇಕು. ಯಾವುದೇ ಪಕ್ಷ, ಧರ್ಮ, ಜಾತಿಯಾದರೂ ಸಹ ಯಾವುದೇ ಒತ್ತಡಕ್ಕೆ ಮಣಿಯದೇ ಕಠಿಣ ಕ್ರಮ ಜರುಗಿಸಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಹೆಚ್.ಎಸ್. ಸುಂದರೇಶ್ ಮನವಿ ಮಾಡಿದ್ದಾರೆ. 

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.