ಪ್ರದಾನಿ ಮೋದಿ ಮತ್ತೊಮ್ಮೆ ಶಿವಮೊಗ್ಗ ಏರ್ಪೋರ್ಟ್ ಗೆ ಆಗಮನ!

ಶಿವಮೊಗ್ಗ : ನಗರದ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಬರಲಿದ್ದಾರೆ . ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ. 
ಚುನಾವಣಾ ಪ್ರಚಾರಕ್ಕಾಗಿ ಬರುತ್ತಿರುವ ಪ್ರಧಾನಿ ಮೋದಿ ಮಾ.25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಾ.24 ರಂದು ದಾವಣಗೆರೆಯ ಸುತ್ತಮುತ್ತಲಿನ ನಾಲ್ಕು ಕ್ಷೇತ್ರಗಳಲ್ಲಿ ರೋಡ್ ಶೋ ನಡೆಯಲಿದೆ. 
ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಆರಂಭಗೊಂಡು 15 ದಿನಗಳು ಕಳೆದಿದ್ದು 151 ವಿಧಾನ ಸಭಾ ಕ್ಷೇತ್ರಗಳಲ್ಲಿ ಈ ವಿಜಯ ಸಂಕಲ್ಪಯಾತ್ರೆಯನ್ನ ಮುಗಿಸಲಾಗಿದೆ. 335 ಎಂಎಲ್ ಸಿ, ಎಂಎಲ್ ಎ, ಸಂಸದರು ಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. 110 ರೋಡ್ ಶೋ, 41 ಬಹಿರಂಗ ಸಭೆಗಳನ್ನ ಬಿಜೆಪಿ ಮುಗಿಸಿದೆ. 
ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ, ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ ಸಮಾರಂಭದಲ್ಲಿ ಭಾಗಿಯಾದ ಪ್ರಧಾನಿ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಬರಲಿದ್ದಾರೆ. 
ಶಿವಮೊಗ್ಗದ ಏರ್ ಪೋರ್ಟ್ ಗೆ ಹೆಲಿಕಾಪ್ಟರ್ ನಿಂದ ಬರುವ ಪ್ರಧಾನಿ ಮೋದಿ ನಂತರ ದೆಹಲಿಗೆ ವಿಮಾನದಲ್ಲಿ ಪ್ರಯಾಣ ಬೆಳಸಲಿದ್ದಾರೆ. 

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.