ಶಿಕಾರಿಪುರದಲ್ಲಿ ಲಂಬಾಣಿ ಜನಾಂಗದ ಒಳಮೀಸಲಾತಿ ಗಲಾಟೆ- ಕಲ್ಲು ತೂರಾಟ: ನಿಷೇದಾಜ್ಞೆ ಜಾರಿಯಾಗಿಲ್ಲ ಎಸ್ಪಿ ಮಾದ್ಯಮಗಳಿಗೆ ಮಾಹಿತಿ

ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿಎಸ್ ವೈ ಮನೆಯ ಮೇಲೆ ಕಲ್ಲು ತೂರಾಟ ನಡೆಯುತ್ತಿದ್ದಂತೆ ಶಿಕಾರಿಪುರದಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಕೆಲ ಸಾಮಾಜಿಕ ಜಾಲತಾಣದಲ್ಲಿ ವೆಬ್ಸೈಟ್ ನಲ್ಲಿ ಸುದ್ದಿಯಾಗಿರುವ ಸುದ್ದಿ ಸುಳ್ಳು ಸುದ್ದಿ ಎಂದು ಎಸ್ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
V have not initiated section 144 in shikaripura.. some news channels r giving this info.. pls correct it ಎಂದು ವ್ಯಾಟ್ಸ್ಪ್ನಲ್ಲಿ ಎಸ್ಪಿ ಹಾಕಿದ್ದಾರೆ.

ಒಳ ಮೀಸಲಾತಿಯಲ್ಲಿ ಲಂಬಾಣಿ ಜನಾಂಗಕ್ಕೆ ಕಡಿತಗೊಳಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನ ವಿರೋಧಿಸಿ ಇಂದು ಶಿಕಾರಿಪುರದಲ್ಲಿ ಲಂಬಾಣಿ ಸಮುದಾಯ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆ ವೇಳೆ ಮಾಜಿ ಸಿಎಂ ಬಿಎಸ್ ವೈಮನೆಯ ಮೇಲೆ ಕಲ್ಲು ತೂರಲಾಗಿತ್ತು.
ಪ್ರತಿಭಟನೆ ವೇಳೆ ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ನಡೆದಿತ್ತು.  ಮಾಜಿ ಸಿಎಂ ಬಿಎಸ್ ವೈ ಹುಟ್ಟುಹಬ್ಬದ ವೇಳೆ ಹಂಚಲಾದ ಸೀರೆಯನ್ನ ಬೀದಿಗೆ ತಂದು ಬೆಂಕಿ ಹಚ್ಚಲಾಗಿತ್ತು. ಪರಿಸ್ಥಿತಿಯನ್ನ ಅವಲೋಕಿಸಿದ ತಾಲೂಕು ಆಡಳಿತ ಪಟ್ಟಣದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.