ಶಿವಮೊಗ್ಗದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ: ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನ

ಶಿವಮೊಗ್ಗ: ಪೊಲೀಸ್ ಹುತಾತ್ಮರ ದಿನಾಚರಣೆಯ ಅಂಗವಾಗಿ* ಶಿವಮೊಗ್ಗ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ *ಕರ್ತವ್ಯದಲ್ಲಿ ಹುತಾತ್ಮರಾದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಮನವನ್ನು* ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿರುತ್ತದೆ.ದಿನಾಂಕ:21-10-1959 ರಂದು ಕೇಂದ್ರ ಮೀಸಲು ಪೊಲೀಸ್‌ ಪಡೆಯ ಡಿ.ಎಸ್‌.ಪಿ. ರವರಾದ *ಶ್ರೀ.ಕರಣ್ ಸಿಂಗ್* ನೇತೃತ್ವದ 20 ಜನರ ತಂಡ ಭಾರತ ಮತ್ತು ಚೀನಾ ದೇಶದ ಗಡಿ ಪ್ರದೇಶದ *ಲಡಾಕ್ ನ ಹಾಟ್ ಸ್ಟಿಂಗ್* ಎಂಬ ಸ್ಥಳದಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿರುವಾಗ *ಚೀನಾ ದೇಶದ ಸೈನಿಕರು ಹಠಾತ್ತನೆ ಆಕ್ರಮಣ ಮಾಡಿ ಶ್ರೀ.ಕರಣ್ ಸಿಂಗ್ ಮತ್ತು ಇತರೆ 09 ಸಿಬ್ಬಂದಿಗಳನ್ನು ಹತ್ಯೆ ಮಾಡಿದ್ದು,* ಹುತಾತ್ಮರ ದೇಹಗಳನ್ನು ದಿನಾಂಕ:28-11-1959 ರಂದು ಭಾರತಕ್ಕೆ ಹಸ್ತಾಂತರಿಸಲಾಗಿದ್ದು, *ಸಕಲ ಪೊಲೀಸ್‌ ಗೌರವಗಳೊಂದಿಗೆ ಅಂತಿಮ ಸಂಸ್ಕಾರ* ಮಾಡಲಾಗಿರುತ್ತದೆ.ಈ ದಾರುಣ ಘಟನೆಯಲ್ಲಿ ಪ್ರಾಣ ತ್ಯಾಗ ಮಾಡಿದವರ ನೆನಪಿನಲ್ಲಿ *ರಾಷ್ಟ್ರಾದ್ಯಾಂತ ಪ್ರತಿ ವರ್ಷ ಅಕ್ಟೋಬರ್ 21 ನೇ ತಾರೀಖಿನಂದು ಪೊಲೀಸ್ ಹುತಾತ್ಮ ದಿನಾಚರಣೆಯನ್ನಾಗಿ* ಆಚರಿಸಿಕೊಂಡು ಬರಲಾಗುತ್ತಿದೆ.ಈ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರತಿ ವರ್ಷದ 21ನೇ ಅಕ್ಟೊಬರ್ ನಂದು *ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಾಗ, ರಾಷ್ಟ್ರ ರಕ್ಷಣೆ ಮಾಡುವಾಗ ಮತ್ತು ಇತರೆ ಕರ್ತವ್ಯ ನಿರತ ಅವಧಿಯಲ್ಲಿ ಪ್ರಾಣ ತ್ಯಾಗ ಮಾಡಿದ ಅಧಿಕಾರಿ ಮತ್ತು ಸಿಬ್ಬಂದಿರವರನ್ನು ಗೌರವ ಪೂರ್ವಕವಾಗಿ ಸ್ಮರಿಸಲಾಗತ್ತಿದೆ.*ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾನ್ಯ ಜಿಲ್ಲಾಧಿಕಾರಿಗಳಾದ *ಡಾ|| ಸೆಲ್ವಮಣಿ ಆರ್, ಐಎಎಸ್* ರವರು ವಹಿಸಿದ್ದು, ಮುಖ್ಯ ಆಹ್ವಾನಿತರಾಗಿ *ಶ್ರೀ ಲೋಖಂಡೆ ಸ್ನೇಹಲ್ ಸುಧಾಕರ್ ಐ.ಎ.ಎಸ್* ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ಮತ್ತು *ಶ್ರೀ ಶಿವಶಂಕರ್ ಈ ಐ.ಎಫ್.ಎಸ್*  ಡಿ.ಸಿ.ಎಫ್ ಶಿವಮೊಗ್ಗ ಪ್ರಾದೇಶಿಕ ವಿಭಾಗ ಶಿವಮೊಗ್ಗ ರವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ *ಶ್ರೀ ಜಿ ಕೆ ಮಿಥುನ್ ಕುಮಾರ್ ಐಪಿಎಸ್* ರವರು ಮಾತನಾಡಿ
 ಹುತಾತ್ಮ ಯೋಧರ *ಸೇವೆಯನ್ನು ಸ್ಮರಿಸಿ,*
ಸಮಾಜದ ರಕ್ಷಣಾ ಕರ್ತವ್ಯ ಪರಿಪಾಲನೆಯಲ್ಲಿ ದಿನಾಂಕ: 01-09-2022 ರಿಂದ 31-08-2023 ರ ಅವಧಿಯಲ್ಲಿ *ಭಾರತ ದೇಶದಲ್ಲಿ ಒಟ್ಟು 189 ಜನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ರವರು ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಾಗ, ಮೃತಪಟ್ಟಿರುತ್ತಾರೆ, ಇದರಲ್ಲಿ ಕರ್ನಾಟಕ ರಾಜ್ಯದ 16 ಪೊಲೀಸ್ ಅಧಿಕಾರಿ / ಸಿಬ್ಬಂದಿರವರು ಮೃತಪಟ್ಟಿದ್ದು* ಇವರುಗಳ ಹೆಸರನ್ನು ವಾಚಿಸಿ, ಹುತಾತ್ಮರ ಸ್ಥಂಬಕ್ಕೆ ಹೂ ಗುಚ್ಛವನ್ನು ಅರ್ಪಿಸುವ ಮೂಲಕ ನಮನಗಳನ್ನು ಸಲ್ಲಿಸಲಾಗಿರುತ್ತದೆ.
 ಈ ಸಂದರ್ಭದಲ್ಲಿ  *ಶ್ರೀ ಅನಿಲ್ ಕುಮಾರ್ ಭೂಮರೆಡ್ಡಿ* ಹೆಚ್ಚುವರಿ ಪೋಲಿಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, *ಶ್ರೀ ಬಾಲರಾಜ್*  ಪೋಲಿಸ್ ಉಪಾಧೀಕ್ಷಕರು ಶಿವಮೊಗ್ಗ ಎ ಉಪ ವಿಭಾಗ, *ಶ್ರೀ ಸುರೇಶ್* ಪೊಲೀಸ್ ಉಪಾಧೀಕ್ಷಕರು ಶಿವಮೊಗ್ಗ ಬಿ ಉಪ ವಿಭಾಗ, *ಶ್ರೀ ಗೋಪಾಲಕೃಷ್ಣ ಟಿ ನಾಯಕ್* ಪೋಲಿಸ್ ಉಪಾಧೀಕ್ಷಕರು ಸಾಗರ ಉಪ ವಿಭಾಗ *ಶ್ರೀ ಕೃಷ್ಣಮೂರ್ತಿ* ಪೋಲಿಸ್ ಉಪಾಧೀಕ್ಷಕರು ಡಿಎಆರ್ ಶಿವಮೊಗ್ಗ, *ಶ್ರೀ ಗಜಾನನ ವಾಮನಸುತರ* ಪೋಲಿಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ, *ಶ್ರೀ ಶಿವಾನಂದ ಮದರಖಂಡಿ* ಪೋಲಿಸ್ ಉಪಾಧೀಕ್ಷಕರು ಶಿಕಾರಿಪುರ ಉಪವಿಭಾಗ,  *ಶ್ರೀ ನಾಗರಾಜ್* ಪೋಲಿಸ್ ಉಪಾಧೀಕ್ಷಕರು ಭದ್ರಾವತಿ ಉಪವಿಭಾಗ ಮತ್ತು ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.