*ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

ಶಿವಮೊಗ್ಗ, :*ಶಿವಮೊಗ್ಗ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಉದ್ಘಾಟನೆಯನ್ನು ಇಂದು ಬೆಳಿಗ್ಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ನೆರವೇರಿಸಿದರು.
ಮುಖ್ಯ ಅಥಿತಿಗಳಾಗಿ ಭಾಗವಹಿಸಿ ಗೌರವ ರಕ್ಷೆಯನ್ನು ಸ್ವೀಕರಿಸಿ, ಪಥ ಸಂಚಲನವನ್ನು ವೀಕ್ಷಿಸಿ ಕ್ರೀಡಾಕೂಡಕ್ಕೆ ಚಾಲನೆ* ನೀಡಿದರು.ಕ್ರೀಡಾಕೂಟದ ಕುರಿತು ಮಾತನಾಡಿ,* ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಕೆಲಸದ ಒತ್ತಡದ ನಡುವೆ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ಇದು ದೈಹಿಕವಾಗಿ ಸದೃಡರಾಗಲು ಮತ್ತು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ. ಕ್ರೀಡೆಯಲ್ಲಿ ಸೋಲು ಮತ್ತು ಗೆಲವು ಸಾಮಾನ್ಯವಾಗಿದ್ದು, ಸೋಲಿನಲ್ಲಿಗಾಲೀ  ಅಥವಾ ಗೆಲುವಿನಲ್ಲಾಗಲೀ ಯಾವ ರೀತಿ ವ್ಯವಹರಿಸಬೇಕು ಎಂಬ ಬಗ್ಗೆ ಸಾಮಾನ್ಯ ಜೀವನ ಮತ್ತು ವೃತ್ತಿ ಜೀವನಕ್ಕೆ ಪಾಠವಾಗಲಿದೆ. ತಮ್ಮ ಸಾಮರ್ಥ್ಯವನ್ನು ತೋರಿಸಲು ಇದು ಉತ್ತಮ ವೇದಿಕೆಯಾಗಿರುತ್ತದೆ ಎಂದು ಹೇಳಿ *ಕ್ರೀಡಾಕೂಟವು ಯಶಸ್ವಿಯಾಗಲೆಂದು ಶುಭಕೋರಿದರು.* 
ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ನ.29 ರಿಂದ ಡಿ.01 ರವರೆಗೆ ಮೂರು ದಿನ ನಗರದ ಜಿಲ್ಲಾ ಸಶಸ್ತ್ರ ಮೀಸಲುಪಡೆ ಕವಾಯತು ಮೈದಾನದಲ್ಲಿ ವಾರ್ಷಿಕ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ. 
ಶ್ರೀ ಮಿಥುನ್ ಕುಮಾರ್ ಜಿ. ಕೆ ಐಪಿಎಸ್* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ರವರು ಎಲ್ಲರಿಗೂ ಸ್ವಾಗತ ಕೋರಿದರು. 

ಡಿ.01 ರಂದು ಸಂಜೆ 4.00ಕ್ಕೆ ಜಿಲ್ಲಾ ಸಶಸ್ತ್ರ ಮೀಸಲುಪಡೆ ಕವಾಯತು ಮೈದಾನದಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. 
ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ,  ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರು ಜಿ.ಕೆ ಮಿಥುನ್ ಕುಮಾರ್ ಉಪಸ್ಥಿತರಿದ್ದರು.

    ಈ ಸಂದರ್ಭದಲ್ಲಿ  *ಶ್ರೀ ಅನಿಕುಮಾರ್ ಭೂಮರಡ್ಡಿ,* ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, *ಶ್ರೀ ಪ್ರಭು ಡಿ.ಟಿ, ಡಿವೈಎಸ್ಪಿ* ಡಿಸಿಆರ್.ಬಿ ಶಿವಮೊಗ್ಗ, *ಶ್ರೀ ನಾಗರಾಜ್,* ಡಿವೈಎಸ್ಪಿ ಭದ್ರಾವತಿ ಉಪ ವಿಭಾಗ, *ಶ್ರೀ ಬಾಲರಾಜ್, ಡಿವೈಎಸ್ಪಿ,* ಶಿವಮೊಗ್ಗ ಎ ಉಪ ವಿಭಾಗ, *ಶ್ರೀ ಸುರೇಶ್ ಕುಮಾರ್,* ಡಿವೈಎಸ್ಪಿ, ಶಿವಮೊಗ್ಗ ಬಿ ಉಪ ವಿಭಾಗ, ಮತ್ತು *ಶ್ರೀ ಗಜಾನನ ವಾಮನ ಸುತರ,* ಡಿವೈಎಸ್ಪಿ, ತೀರ್ಥಹಳ್ಳಿ ಉಪ ವಿಭಾಗ, ಜಿಲ್ಲೆಯ ಎಲ್ಲಾ ಪೊಲೀಸ್ ನಿರೀಕ್ಷಕರು, *ಪೊಲೀಸ್ ಉಪ ನಿರೀಕ್ಷಕರು ಹಾಗೂ ಪೊಲೀಸ್ ಸಿಬ್ಬಂಧಿಗಳು ಉಪಸ್ಥಿತರಿದ್ದರು.*
------

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.