ಫೆ.27 ರಂದು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ:ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾಹಿತಿ

ಶಿವಮೊಗ್ಗ: ದಿನಾಂಕ:27-02-2024ನೇ ಮಂಗಳವಾರ 'ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನ ಮತ್ತು 'ಕಾರ್ಯಾಗಾರ'ವನ್ನು ಆಯೋಜಿಸಲಾಗಿದ್ದು, ಈ ಮಹಾಸಮ್ಮೇಳನವನ್ನು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯರವರು ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟದ ಸಚಿವರುಗಳು, ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರ ಸಿ.ಎಸ್. ಷಡಾಕ್ಷರಿಯವರು ಹೇಳಿದರು.
ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ
ಜಿಲ್ಲಾ ಶಾಖೆ, ಶಿವಮೊಗ್ಗ ದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು.

  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ  ಮಹಾ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮ ಫೆ.27 ರಂದು ಕೃಷ್ಣ ವಿಹಾರ,ಗೇಟ್ ನಂ.1 ಮೇಕ್ರಿ ಸರ್ಕಲ್‌ ಹತ್ತಿರ,ಅರಮನೆ ಮೈದಾನ ಬೆಂಗಳೂರಿನಲ್ಲಿ ಬೆಳಿಗ್ಗೆ 10-30 ಕ್ಕೆ ಆರಂಭವಾಗಲಿದೆ ಎಂದರು.
ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು ಎರಡು ಲಕ್ಷ ಸರ್ಕಾರಿ ನೌಕರರು ಸಮ್ಮೇಳನ ಹಾಗೂ ಕಾರ್ಯಾಗಾರದಲ್ಲಿ ಭಾಗವಹಿಸುತ್ತಿದ್ದಾರೆ ಎಂದರು.

*ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳು:* 
ಸಮ್ಮೇಳನದಲ್ಲಿ ಸರ್ಕಾರಿ ನೌಕರರ ಸಂಘದ ಈ ಕೆಳಕಂಡ ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡಿಸಲಾಗುವುದು.
1) 7ನೇ ವೇತನ ಆಯೋಗದಿಂದ ವರದಿ ಪಡೆದು, ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸುವುದು.
2) ಎನ್.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್‌ ಮರುಸ್ಥಾಪಿಸುವ ಸಲುವಾಗಿ ಮೊದಲನೇ ಹಂತದಲ್ಲಿ ಎನ್.ಪಿ.ಎಸ್. ನೌಕರರ ವೇತನದಲ್ಲಿ ಕಟಾವಣೆಯಾಗುತ್ತಿರುವ ವಂತಿಗೆಯನ್ನು ಏಪ್ರಿಲ್- 2024 ರಿಂದ ಕಡಿತಗೊಳಿಸದಂತೆ ಸರ್ಕಾರಿ ಆದೇಶ ಹೊರಡಿಸುವುದು
3) ರಾಜ್ಯ ಸರ್ಕಾರಿ ನೌಕರರು ಮತ್ತು ಅವಲಭಿತ ಕುಟುಂಬ ಸದಸ್ಯರಿಗೆ ನಗದುರಹಿತ ಆರೋಗ್ಯ ಚಿಕಿತ್ಸೆ ಒದಗಿಸುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (ಕೆ.ಎ.ಎಸ್‌.ಎಸ್) ಯನ್ನು ಶೀಘ್ರ ಅನುಷ್ಠಾನಗೊಳಿಸುವುದು.

 ಶಿವಮೊಗ್ಗದಿಂದ 100 ಬಸ್ ನಲ್ಲಿ ನೌಕರರು ಹೋಗಲಿದ್ದಾರೆ. ಮಹಾ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರಿಗೆ ಬಸ್ ವ್ಯವಸ್ಥೆ ಮತ್ತು ಎರಡು ದಿನ ಓಓಡಿ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಸಮಸ್ತ ನೌಕರರು ಮಹಾ ಸಮ್ಮೇಳನಕ್ಕೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಕಾರಿ  ನೌಕರರ ಸಂಘದ ಪಧಾದಿಕಾರಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.