ಸಾಗರ;*ಅಧ್ಯಾಪಕರ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ*...
ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಜು ಕೆ.ಆರ್. ಅವರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ನೀಡಿದರು.
ರಾಜು ಅವರು ಉತ್ತಮ ಪ್ರಾಧ್ಯಾಪಕ ಉಪನ್ಯಾಸಕರಾಗಿದ್ದು ಕಾಲೇಜಿನಲ್ಲಿ ಅತ್ಯಂತ ನಿಷ್ಠೆ ಯಿಂದ ಪಾಠ ಮಾಡುತ್ತಿದ್ದಾರೆ. ಯಾರತಂಟೆಗೂ ಹೋಗದೆ ತಮ್ಮಷ್ಟಕ್ಕೆ ತಾವು ಮಕ್ಕಳ ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ದುಡಿಯುತ್ತಿದ್ದಾರೆ. ಅಂತಹ ಉಪನ್ಯಾಸಕರ ಮೇಲೆ ಹಲ್ಲೆ ಮಾಡಿರುವುದು ಅತ್ಯಂತ ಖಂಡನೀಯ. ತಕ್ಷಣ ಹಲ್ಲೆ ಮಾಡಿರುವ ತಂದೆ ಮತ್ತು ಮಗನ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಕಾಲೇಜಿನ ಎದುರು ಮನವಿ ಸ್ವೀಕರಿಸಿ ಮಾತ ನಾಡಿದ ಉಪವಿಭಾಗಾಧಿಕಾರಿ ಯತೀಶ್. ಆರ್ ಪ್ರಾಧ್ಯಾಪಕ ರಾಜು ಅವರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದೆ. ಪೊಲೀಸರು ಹಲ್ಲೆಗೆ ಸಂಬಂಧಪಟ್ಟಂತೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ತರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಭರವಸೆ ನೀಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು. ಪ್ರತಿಭಟನೆಯಲ್ಲಿ ಮಧುಚಂದ್ರ, ರಕ್ಷಿತ್, ಶ್ರೇಯಸ್, ಯೋಗೇಶ್, ಶೈಲಜ, ವೈಷ್ಣವಿ, ಧನ್ಯ ಡಿ., ಪವನಕುಮಾರ್, ಗಜೇಂದ್ರ, ನಿಖಿಲ್, ಮದು ಎಂ.ಬಿ. ,ಭೂಮಿಕಾ ಇನ್ನಿತರರು ಹಾಜರಿದ್ದರು.
Leave a Comment