ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜೂ. 27 ರಂದು ನಾಡಪ್ರಭು ಕೆಂಪೇಗೌಡರ 516 ನೆಯ ಜಯಂತಿ ಕಾರ್ಯಕ್ರಮ

ಶಿವಮೊಗ್ಗ : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯು ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಪ್ರತಿ ವರ್ಷದಂತೆ ನಾಡಪ್ರಭು ಕೆಂಪೇಗೌಡರ 516 ನೆಯ ಜಯಂತಿ ಕಾರ್ಯಕ್ರಮವನ್ನು ಜೂ. 27 ರಂದು ಶುಕ್ರವಾರ ಮಧ್ಯಾಹ್ನ 12:00 ಕ್ಕೆ ಶರಾವತಿ ನಗರ ಬಡಾವಣೆಯಲ್ಲಿರುವ ಶ್ರೀ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜಯಂತಿ ಕಾರ್ಯಕ್ರಮ ನಡೆಯಲಿದೆ ಎಂದು ಡಿ. ಮಂಜುನಾಥ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಶ್ರೀ ಶ್ರೀ ಸಾಯಿನಾಥ ಸ್ವಾಮೀಜಿ ಅವರ ಉಪಸ್ಥಿತಿಯಲ್ಲಿ, ವಿಧಾನ ಪರಿಷತ್ತು ಸದಸ್ಯರಾದ ಎಸ್. ಎಲ್. ಬೋಜೇಗೌಡರು,  ಸೂಡಾ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್, ಕಡಿದಾಳು ಗೋಪಾಲ, ಕೃಷಿ ವಿ.ವಿ. ಸಿಂಡಿಕೇಟ್ ಸದಸ್ಯರಾದ ಶಶಾಂಕ್, ಮಲೆನಾಡು ಕ್ರೆಡಿಟ್ ಕೋ ಸೊಸೈಟಿ ಅಧ್ಯಕ್ಷರಾದ ಕೆ. ಎನ್. ರಾಮಕೃಷ್ಣ, ಬಿ. ಎ. ರಮೇಶ್ ಹೆಗಡೆ, ಕೆ. ಪಿ. ಶ್ರೀಪಾಲ್, ವಕೀಲರ ಸಂಘದ ರಾಘವೇಂದ್ರ, ಹಾಪ್ ಕಾಮ್ಸ್ ಅಧ್ಯಕ್ಷರಾದ ಸಂತೇಕಡೂರು ವಿಜಯಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.  ಸಮುದಾಯದ ಚುನಾಯಿತ ಪ್ರತಿನಿಧಿಗಳು, ಗಣ್ಯರು, ವಿವಿಧ ಕ್ಷೇತ್ರದಲ್ಲಿ ಸಾಧನೆಮಾಡಿದ ಸಾದಕರು ಸೇರಿದಂತೆ ಎಲ್ಲರೂ ಭಾಗವಹಿಸಲಿದ್ದಾರೆ.
        
ಬಹಳ ಮುಖ್ಯವಾಗಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ವಿಶ್ವವಿದ್ಯಾಲಯ, ಕೃಷಿ, ವೈದ್ಯಕೀಯ ಸೇರಿದಂತೆ ವಿವಿಧ ಪರೀಕ್ಷೆಗಳಲ್ಲಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ. ಬೇರೆ ಬೇರೆ ಕ್ಷೇತ್ರ ಹೆಕ್ಟೇರಗಳಲ್ಲಿ ಸಾಧನೆಮಾಡಿದ ಸಾಧಕರಿಗೆ ಅಭಿನಂದನೆ ಕಾರ್ಯಕ್ರಮ ನಡೆಯಲಿದೆ. ಬೈಕ್, ಕಾರುಗಳ ಜೊತೆಯಲ್ಲಿ ನಾಡಪ್ರಭು ಕೆಂಪೇಗೌಡರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಯಲಿದೆ. ಬಾಲರಾಜ್ ಅರಸ್ ವೃತ್ತದಿಂದ ಕುವೆಂಪು ರಂಗಮಂದಿರ ಅಲ್ಲಿಂದ ಶ್ರೀ ಆದಿಚುಂಚನಗಿರಿ ಸಮುದಾಯ ಭವನ ತಲುಪುವಂತೆ ಕಾರ್ಯಯೋಜನೆ ರೂಪಿಸಲಾಗಿದೆ. ಜಿಲ್ಲಾ ಒಕ್ಕಲಿಗರ ಸಂಘ, ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಒಕ್ಕೂಟ, ಜಿಲ್ಲಾ ಒಕ್ಕಲಿಗರ ಯುವ ವೇದಿಕೆ, ಉದ್ಯಮಿ ಒಕ್ಕಲಿಗ (ಎಫ್.ಸಿ.),ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕ, ತಾಲ್ಲೂಕು ಒಕ್ಕಲಿಗರ ಸಂಘ, ಮಹಿಳಾ ಸಂಘಟನೆಗಳು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
        
ಚುಂಚಾದ್ರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಗ್ರಾಮೀಣ ಆಟಗಳ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಅಖಿಲ ಕರ್ನಾಟಕ ಒಕ್ಕಲಿಗರ ಮಹಿಳಾ ಘಟಕದ ಜಿಲ್ಲಾ ಸಮಿತಿಯ ನೇತೃತ್ವದಲ್ಲಿ  ಕೆಂಪೇಗೌಡರ ಕುರಿತು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಏರ್ಪಡಿಸಲಾಗಿತ್ತು. ಇಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಜಿಲ್ಲಾ ಒಕ್ಕಲಿಗರ ಮಹಿಳಾ ವೇದಿಕೆ ನೇತೃತ್ವದಲ್ಲಿ ಪಿ.ಯು. ಕಾಲೇಜು ವಿದ್ಯಾರ್ಥಿಗಳಿಗೆ ಕೆಂಪೇಗೌಡರ ಕುರಿತು ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಇಲ್ಲಿ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು.
       
ಪ್ರಗತಿಪರ ರೈತರು, ಉದ್ಯಮಿಗಳು,  ಮಾಜಿ ಯೋಧರು, ಮಾದ್ಯಮ ಕ್ಷೇತ್ರದಲ್ಲಿ ತೊಡಗಿರುವವರು, ಸಹಕಾರಿ ಕ್ಷೇತ್ರದ ಸಾಧಕರು, ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದವರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರು, ಮೆಡಿಕಲ್, ಇಂಜಿನಿಯರಿಂಗ್, ಸಿಂಡಿಕೇಟ್, ಸೆನೆಟ್, ಸರ್ಕಾರದ ವಿವಿಧ ಜವಾಬ್ದಾರಿಗಳಲ್ಲಿ ನೇಮಕಗೊಂಡವರು, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿದು ಸಾಧಿಸಿದವರನ್ನು ಈ ಸಂದರ್ಭದಲ್ಲಿ ಗೌರವಿಸಲಾಗುವುದು ಎಂದು ಡಿ. ಮಂಜುನಾಥ ವಿವರಿಸಿದರು.

ಈ ಕಾರ್ಯಕ್ರಮದಲ್ಲಿ ನಗರದ, ಗ್ರಾಮೀಣ ಪ್ರದೇಶಗಳ ಎಲ್ಲರೂ ಭಾಗವಹಿಸುವಂತೆ ಜಿಲ್ಲಾ ಸಂಘದ ಅಧ್ಯಕ್ಷರಾದ ಬಿ. ಎ. ರಮೇಶ್ ಹೆಗಡೆ, ಗೋ. ರಮೇಶ್ ಗೌಡರು, ಶಂಕರ್, ಡಾ. ಶಾಂತಾ ಸುರೇಂದ್ರ, ಪ್ರತಿಮಾ ಡಾಕಪ್ಪಗೌಡರು, ತಾಯಿಮನೆ ಸುದರ್ಶನ್, ಉದ್ಯಮಿ ರಾಕೇಶ್ ಗೌಡರು, ಎಂ. ಎ. ರಮೇಶ್ ಹೆಗಡೆ, ರಘುರಾಜ್, ಭಾರತಿ ರಾಮಕೃಷ್ಣ, ಶಶಿಕಲಾ ಪ್ರಶಾಂತ, ಗುರುರಾಜ್ ಗೌಡ, ರಘುಗೌಡ ಭೈರಾಪುರ ಶಿವಪ್ಪಗೌಡರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.