ಆಪರೇಷನ್ ಸಿಂಧೂರದಲ್ಲಿ ಹೋರಾಡಿದ ಯೋಧನಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅದ್ದೂರಿ ಸ್ವಾಗತ

ಶಿವಮೊಗ್ಗ: ಇತ್ತೀಚಿಗೆ ನಡೆದ ಪೆಹೆಲ್ಗಾಂ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಭಾರತ ಸೇನೆ ಕಾರ್ಯಾಚರಣೆ ನಡೆಸಿತ್ತು ಈ ಸಂದರ್ಭದಲ್ಲಿ ಪಾಕಿಸ್ತಾನದ ಕೌಂಟರ್ ಫೈಯರ್ ಅನ್ನು ಎದುರಿಸಿದ ಯೋಧರಲ್ಲಿ ನಮ್ಮ ಶಿವಮೊಗ್ಗ ಮೂಲದ ಭಾರತ ಸೇನೆಯ ಹೆಮ್ಮೆಯ ಯೋಧ ವಿಜಯ್ ಕುಮಾರ್ ಅವರು ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಪ್ರಥಮ ಬಾರಿಗೆ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅವರನ್ನು ಅದ್ದೂರಿಯಾಗಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.
 ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರಸನ್ನ ಕುಮಾರ್ ಬ್ಲಾಕ್ ಅಧ್ಯಕ್ಷರಾದ ಶಿವಕುಮಾರ್  ಯುವ ಕಾಂಗ್ರೆಸ್ ಮುಖಂಡರಾದ ಸಿಜಿ ಮಧುಸೂದನ್ ಚೇತನ್ ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಹರ್ಷಿತ್ ಗೌಡ NSUI ಅಧ್ಯಕ್ಷರಾದ ವಿಜಯಕುಮಾರ್ ಯುವ ಕಾಂಗ್ರೆಸ್ ಶಿವಮೊಗ್ಗ ನಗರಾಧ್ಯಕ್ಷರಾದ ಚರಣ್ NSUI ಕಾರ್ಯಾಧ್ಯಕ್ಷರಾದ ಕಾಟಿಕೆರೆ ರವಿ, ಯುವ ಕಾಂಗ್ರೆಸ್ ಹಾಗೂ NSUI ಪದಾಧಿಕಾರಿಗಳಾದ ಅಬ್ದುಲ್ ಸತ್ತಾರ್ 'ಶಿವಕುಮಾರ್ ,ಧನರಾಜ್, ಗೌತಮ್, ರವಿ ,ಚಂದ್ರೋಜಿ, ವರುಣ್, ಸುಭಾನ್, ಪರಾಜ್ ತೌಪಿಕ್, ಅರ್ಫತ್, ಅಭಿಷೇಕ್, ಶ್ರೀಕಾಂತ್, ಜೀವನ್, ನಂದೀಶ್, ಇನ್ನು ಹಲವಾರು ಕಾರ್ಯಕರ್ತರು ಭಾಗಿಯಾಗಿದ್ದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.