ರಸ್ತೆ ಸುರಕ್ಷತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ:ಮಿಥುನ್ ಕುಮಾರ್, ಜಿಲ್ಲಾ ರಕ್ಷಣಾಧಿಕಾರಿ

ಶಿವಮೊಗ್ಗ: ರಸ್ತೆ ನಿಯಮಗಳನ್ನು ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲಿಸಲೇಬೇಕು ಅದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಎಂದು ಎಲ್ಲಾ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಹೇಳಿದರು.

ಅವರು ಈ ದಿನ ಬೆಳಿಗ್ಗೆ ನಗರದ ಉಷಾ ನರ್ಸಿಂಗ್ ಹೋಮ್, ಬಳಿ, ಅಕ್ಕಮಹಾದೇವಿ ಸರ್ಕಲ್ ನಲ್ಲಿ ಸಿಗ್ನಲ್ ಲೈಟ್ ಅಳವಡಿಕೆಗೆ ಚಾಲನೆ ನೀಡಿ ಮಾತನಾಡಿದರು.
 ಈಗಾಗಲೇ ರಸ್ತೆ ಅಪಘಾತದಿಂದ ಸಾಕಷ್ಟು ಜನ ರಸ್ತೆಯಲ್ಲಿ ಪ್ರಾಣವನ್ನು ಬಿಡುತ್ತಿದ್ದಾರೆ. ವೇಗವಾಗಿ ಚಲಿಸುವುದು. ಹೆಲ್ಮೆಟ್ ಹಾಕದೇ ಇರುವುದು. ಸೀಟ್ ಬೆಲ್ಟ್ ಧರಿಸದೆ ಇರುವುದು. ಮತ್ತು ಮಧ್ಯಪಾನ ಮಾಡಿ ವಾಹನ ಚಲಾಯಿಸುವುದು ಇದರಿಂದ ಅಪಘಾತಗಳ ಪ್ರಮಾಣ ಹೆಚ್ಚುತ್ತಿದೆ. ಜೀವಕ್ಕಿಂತ ಅಮೂಲ್ಯವಾದ ವಸ್ತು ಬೇರೆ ಇಲ್ಲ ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಸ್ತೆ ನಿಯಮಗಳನ್ನು ಪಾಲನೆ ಮಾಡಲೇಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಕಾರ್ಪೊರೇಟರ್  ಯೋಗೇಶ್ ಅವರು ಮಾತನಾಡುತ್ತಾ. ಪೋಲಿಸ್ ಇಲಾಖೆ ಸಿಬ್ಬಂದಿಗಳಿಗೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸಂಪೂರ್ಣ. ಬೆಂಬಲ ನೀಡಿದ್ದು ಇದರಿಂದ ಬಹಳ ಉತ್ತಮವಾದ ಕಾರ್ಯ ನಡೆಯುತ್ತಿದೆ ಎಂದು ಪೊಲೀಸ್ ಇಲಾಖೆಯನ್ನು ಶ್ಲಾಘಿಸಿದರು. 

ಇದೇ ಸಂದರ್ಭದಲ್ಲಿ ನಾಗರೀಕರ ಪರವಾಗಿ ಬಳ್ಳೇಕೆರೆ ಸಂತೋಷ ಅವರು ಜಿಲ್ಲಾ ಪೊಲೀಸ್ ಇಲಾಖೆಗೆ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ ವಿಜಯಕುಮಾರ್,ಸಂಚಾರಿವೃತ್ತ ನಿರೀಕ್ಷಕರಾದ ದೇವರಾಜ್, ನವೀನ್ ಮಠಪತಿ ಹಾಗೂ
ಪತ್ರಕರ್ತ ಕೆ.ಆರ್ ಸೋಮನಾಥ್. ದಿನೇಶ್ ಶೆಟ್ ,ರಾಜೇಂದ್ರ. ಹರೀಶ್. ಗಿರಿರಾಜ್. ಗೋಪಾಲ ಹಾಗೂ ಪೊಲೀಸ್ ಇಲಾಖೆಯವರು ಉಪಸ್ಥಿತರಿದ್ದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.