ಆಗಸ್ಟ್ 11 ರಿಂದ 14 ರವರೆಗೆ ಶಿವಮೊಗ್ಗದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮ "

ನೆಹರೂ ಕ್ರೀಡಾಂಗಣದಲ್ಲಿ ’ಚುಂಚಾದ್ರಿ ಕಪ್ ’ ವಾಲಿಬಾಲ್ ಪಂದ್ಯಾವಳಿಗೀಗ 23ರ ಹರೆಯ "

ಶಿವಮೊಗ್ಗ ನಗರದ ಶ್ರೀ ಆದಿಚುಂಚನಗಿರಿ
ಶಿಕ್ಷಣ ಟ್ರಸ್ಟ್ ವತಿಯಿಂದ ಆಗಸ್ಟ್ 11 ರಿಂದ 14 ರ ವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ ವಾಲಿಬಾಲ್ ಸಂಭ್ರಮವನ್ನು ಏರ್ಪಡಿಸಲಾಗಿದೆ.
     ಸಹ್ಯಾದ್ರಿ ತಪ್ಪಲಿನ ಮಲೆನಾಡಿನ ಮಡಿಲಲ್ಲಿ ಶೈಕ್ಷಣಿಕ ಹಾಗೂ ಬೌದ್ಧಿಕ ಬೆಳವಣಿಗೆಯಲ್ಲಿ ವಿಶೇಷ ಹೆಸರಿನಿಂದ ಕಂಗೊಳಿಸುತ್ತಿರುವ ವಿದ್ಯಾ ಸಂಸ್ಥೆಯೇ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ.
    ಯುವ ಜನಾಂಗದಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಯೋಗ್ಯ ಮಾರ್ಗದರ್ಶನ ಮತ್ತು ತರಬೇತಿ ನೀಡಿ ಅವರ ಬದುಕನ್ನು ರೂಪಿಸುವ ಪ್ರಯತ್ನಕ್ಕಾಗಿ ಶಿವಮೊಗ್ಗ ನಗರದಲ್ಲಿರುವ ಶ್ರೀಆದಿಚುಂಚನಗಿರಿ ಶಾಖಾ ಮಠದ ಪೂಜ್ಯರಾದ ಶ್ರೀ ಶ್ರೀ ಪ್ರಸನ್ನನಾಥಸ್ವಾಮೀಜಿ ಯವರ ನೇತೃತ್ವದಲ್ಲಿ ಶಿವಮೊಗ್ಗ ನಗರದ ಅನೇಕ ಸಂಸ್ಥೆಗಳ ಕ್ರೀಡಾ ತಜ್ಞರ ಮತ್ತು ತರಬೇತುದಾರರ ಒಂದು ತಂಡ ಅಸ್ತಿತ್ವಕ್ಕೆ ಬಂದಿರುವುದರಿಂದ ಇವತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯವಾಗಿದೆ.
     ವಿದ್ಯಾಸಂಸ್ಥೆಯಿಂದ ಕ್ರೀಡೆಯಲ್ಲಿ ಉತ್ತಮ ತರಬೇತಿಯನ್ನು ನೀಡಿ ಕ್ರೀಡಾಪಟುಗಳು ರಾಷ್ಟ್ರ ಹಾಗೂ ಅಂತರಾಷ್ಟ್ರ ಮಟ್ಟದಲ್ಲಿ ಮೆರೆಯುವಂತೆ ಮಾಡಿದೆ.
ಮಕ್ಕಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ,ಪ್ರೋತ್ಸಾಹಿಸುವ ಉದ್ದೇಶದಿಂದ ಅನೇಕ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸುತಿದ್ದೇವೆ. ಇದರಂತೆ ಶಿವಮೊಗ್ಗ ಜಿಲ್ಲೆಯ ವಾಲಿಬಾಲ್ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ (ರಿ ) ಮತ್ತು ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವದ ಶಿವಮೊಗ್ಗ ಜಿಲ್ಲಾ ಮಟ್ಟದ ಆಹ್ವಾನಿತ ಪ್ರೌಢಶಾಲಾ ಬಾಲಕ ಮತ್ತು ಬಾಲಕೀಯರಿಗಾಗಿ "ಸಿ. ಎಸ್. ಐ. ಕಪ್ " 1996 ವಾಲಿಬಾಲ್ ಪಂದ್ಯಾವಳಿಯನ್ನು ಆರಂಭಿಸಲಾಯಿತು.
ಪೂಜ್ಯ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಈ ಪಂದ್ಯಾವಳಿಗೆ 2000 ಇಸ್ವಿಯಲ್ಲಿ "ಚುಂಚಾದ್ರಿ ಕಪ್ "ಎಂಬ ನೂತನ ಅಭೀದಾನ ಮಾಡಲಾಯಿತು.
79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ ಶ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು , ಈ ಕ್ರೀಡಾಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು.
   ಈ ಪಂದ್ಯಾವಳಿಯಲ್ಲಿ ಪ್ರತಿ ವರ್ಷ ಶಿವಮೊಗ್ಗ ಜಿಲ್ಲೆಯ ಪ್ರೌಢಶಾಲಾ ಬಾಲಕರ ಸುಮಾರು 50 ತಂಡಗಳು, ಬಾಲಕಿಯರ 32 ತಂಡಗಳು ಭಾಗವಹಿಸಿ ಅದ್ಭುತ ಪ್ರದರ್ಶನ ನೀಡುತ್ತಿವೆ. ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ "ಬೆಸ್ಟ್ ಅಟ್ಯಾಕರ್,ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ, ಬೆಸ್ಟ್ ಸೆಂಟರ್ ಬ್ಲಾಕರ್ "ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾರಿತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ.
        ಈ ಬಾರಿ ಬಾಲಕಿಯರ ವಿಭಾಗದಲ್ಲಿ 32 ಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುತ್ತಿರುವುದರಿಂದ  ಈ ಬಾರಿಯೂ  ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ನಗದು ಬಹುಮಾನ ಕೊಡುತ್ತಿರುವುದು ಮತ್ತೊಂದು ವಿಶೇಷ.
       ಈ ಪಂದ್ಯಾವಳಿಯು ಆರಂಭವಾದಾಗಿನಿಂದ ಪ್ರತಿವರ್ಷವೂ ಶಿವಮೊಗ್ಗ ಜಿಲ್ಲೆಯ 20 ರಿಂದ 25 ವಾಲಿಬಾಲ್ ಕ್ರೀಡಾಪಟು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿ ಶಿವಮೊಗ್ಗ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ.
   ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಮಹಾಪೋಷಕರು ಹಾಗೂ ಕ್ರೀಡಾ ಪ್ರೇಮಿಗಳಾದ ಪೂಜ್ಯ ಶ್ರೀಶ್ರೀ ಪ್ರಸನ್ನನಾಥ ಸ್ವಾಮಿಜಿಯವರು ಪ್ರತಿ ವರ್ಷ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರೊಂದಿಗೆ ಜಿಲ್ಲಾ ವಾಲಿಬಾಲ್ ಸಂಸ್ಥೆಯು ಸಹ ಕೈಜೋಡಿಸಿದೆ.
          ಈ ವರ್ಷ ಪಂದ್ಯಾವಳಿಯು ದಿನಾಂಕ:11-08-2025 ರಿಂದ 14-08-2025 ರ ವರೆಗೆ ನಡೆಯಲಿದ್ದು, ಆಟಗಾರರ ಅನುಕೂಲಕ್ಕಾಗಿ ಈಗಾಗಲೇ 4 ಅಂಕಣಗಳನ್ನು ಸಿದ್ಧಪಡಿಸಲಾಗಿದೆ, ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಹೊರಾಂಗಣ ಮತ್ತು ಒಳಾಂಗಣದಲ್ಲಿ ವಾಲಿಬಾಲ್ ಪಂದ್ಯಾವಳಿಯು ನಡೆಸಲಾಗುವುದು. ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ.
      ಜಿಲ್ಲೆಯ ವಿವಿಧ ತಾಲೂಕುಗಳಿಂದ ಬರುವ ಎಲ್ಲಾ ಕ್ರೀಡಾಪಟುಗಳಿಗೂ ವಸತಿ ಹಾಗೂ ಊಟದ ವ್ಯವಸ್ಥೆಯನ್ನೂ,ಸಾರಿಗೆ ವ್ಯವಸ್ಥೆಯನ್ನು ಮಾಡಲಾಗಿದೆ.
ಪ್ರತಿ ವರ್ಷದಂತೆ ಈ ವರ್ಷನೂ ಸಹ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ಜಿಲ್ಲೆಯ 17 ವರ್ಷದ ವಯೋಮಿತಿ ಯೊಳಗಿನ ಕ್ರೀಡಾಪಟುಗಳನ್ನೊಳಗೊಂಡ ಪ್ರೌಢಶಾಲಾ ತಂಡಗಳು ಭಾಗವಹಿಸಬಹುದಾಗಿದೆ.

ನಿಬಂಧನೆಗಳು :1) ತಂಡಗಳು ಕಡ್ಡಾಯವಾಗಿ ಕ್ರೀಡಾ ಸಮವಸ್ತ್ರ ಧರಿಸಿ ಈ ಪಂದ್ಯಾವಳಿಯಲ್ಲಿ ಭಾಗವಹಿಸಬೇಕು.2) ವಯೋಮಿತಿ 17 ವರ್ಷ ಮೀರಿರಬಾರದು. (01-01-2009 ರ ನಂತರ ಜನಿಸಿರಬೇಕು.)3) ಕಡ್ಡಾಯವಾಗಿ 18 ಕಾಲಂ ಇರುವ ಗುರುತಿನ ಚೀಟಿ ತರಬೇಕು. (ಇತ್ತೀಚಿನ ಭಾವಚಿತ್ರದೊಂದಿಗೆ ) ಶಾಲೆಯ ಪ್ರಾಂಶುಪಾಲರಿಂದ ದೃಢೀಕರಣ ಪತ್ರವನ್ನು ದೈಹಿಕ ಶಿಕ್ಷಣ ಶಿಕ್ಷಕರು ತರತಕ್ಕದ್ದು.4) ವಿದ್ಯಾರ್ಥಿಗಳ ಆಧಾರ್ ಕಾರ್ಡ್ ಮತ್ತು ವಿದ್ಯಾರ್ಥಿಯ ಎಸ್‌ಟಿಎಸ್ ಸಂಖ್ಯೆ ಕಡ್ಡಾಯವಾಗಿರುತ್ತದೆ.

     ಈ ವಿಷಯವನ್ನು ತಮ್ಮ ಪತ್ರಿಕೆಯಲ್ಲಿ ಪ್ರಕಟಿಸಿ ಈ ಪಂದ್ಯಾವಳಿಯು ಯಶಸ್ವಿಯಾಗಲು ಸಹಕರಿಸಬೇಕಾಗಿ ವಿನಂತಿ. ಹಿಂದಿನಿಂದಲೂ ತಾವುಗಳು ನೀಡಿದ ಸಹಕಾರಗಳಿಗೆ ಪಂದ್ಯಾವಳಿಯ ಸಂಘಟನಾ ಸಮಿತಿಯು ತಮಗೆ ಧನ್ಯವಾದಗಳು ಸಲ್ಲಿಸುತ್ತದೆ.

:ನಗದು ಬಹುಮಾನ :ಬಾಲಕರ ವಿಭಾಗ: ಪ್ರಥಮ ಸ್ಥಾನ --- 5000 ರೂ, ದ್ವಿತೀಯ ಸ್ಥಾನ 4000 ರೂ, ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.

ಬಾಲಕಿಯರ ವಿಭಾಗ: ಪ್ರಥಮ ಸ್ಥಾನ ಪಡೆದ ತಂಡಕ್ಕೆ 5000 ರೂ ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 4000 ರೂ , ತೃತೀಯ ಸ್ಥಾನ 3000 ರೂ ಮತ್ತು ನಾಲ್ಕನೇ ಸ್ಥಾನ 2000 ರೂ ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.


   ಕ್ರೀಡೆ ನಡೆಸುವ ಉದ್ದೇಶ, : ಶಿವಮೊಗ್ಗ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳನ್ನು ಬೆಳಕಿಗೆ ತರುವುದು. ಈಗ ಸುಮಾರು ಬಾಲಕ ಬಾಲಕಿಯರು ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ ದೇಶಕ್ಕೆ ಅನೇಕ ಪ್ರಶಸ್ತಿಗಳನ್ನು ತಂದುಕೊಟ್ಟಿರುವುದೇ ಇದಕ್ಕೆ ಸಾಕ್ಷಿ. ಈಗಲೂ ಅನೇಕ ಪ್ರತಿಭಾವಂತ ಕ್ರೀಡಾಪಟುಗಳು ಚುಂಚಾದ್ರಿ ಕಪ್ ವಾಲಿಬಾಲ್ ನಿಂದ ಉತ್ತೇಜಿತರಾಗಿ ದೇಶದ ವಿವಿಧ ಕಂಪನಿಗಳಲ್ಲಿ ಸೇವೆ ಸಲ್ಲಿಸುವಂತಹ ಅವಕಾಶ ಪಡೆದುಕೊಂಡಿದ್ದಾರೆ.
    ನಗರದ ಶ್ರೀ ಆದಿಚುಂಚನಗಿರಿ  ಶಿಕ್ಷಣ ಟ್ರಸ್ಟ್ ಮತ್ತು ಚುಂಚಾದ್ರಿ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರಿಗೆ ಆ.14 ರಂದು ನೆಹರು ಕ್ರೀಡಾಂಗಣದಿಂದ ರಸ್ತೆ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.

     ಬೆಳಿಗ್ಗೆ ಸ್ಥಳದಲ್ಲಿಯೇ ನೊಂದಣಿ ಮಾಡಿಕೊಳ್ಳಬಹುದು. ಅಂದು 6 ಗಂಟೆಗೆ ನೆಹರೂ ಕ್ರೀಡಾಂಗಣದಿಂದ  ಪ್ರಾರಂಭವಾಗುವ ಓಟದ ಸ್ಪರ್ಧೆ ಶರಾವತಿ ನಗರದ ಬಿಜಿಎಸ್ ವಸತಿ ಶಾಲೆಯ ಆವರಣದಲ್ಲಿ ಕೊನೆಗೊಳ್ಳಲಿದೆ. ಭಾಗವಹಿಸಿದ ಎಲ್ಲಾ ಕ್ರೀಡಾ ಪಟುಗಳಿಗೂ ಉಪಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.
    ರಸ್ತೆ ಓಟದ ಸ್ಪರ್ಧೆ:
      ಪ್ರಾಥಮಿಕ ಬಾಲಕಿಯರಿಗೆ 2 ಕಿ. ಮೀ., ಪ್ರಾಥಮಿಕ ಬಾಲಕರಿಗೆ,  ಹಾಗೂ ಪ್ರೌಢಶಾಲಾ ಬಾಲಕಿಯರಿಗೆ 3 ಕಿ.ಮೀ, ಪ್ರೌಢಶಾಲಾ ಬಾಲಕರಿಗೆ 5 ಕಿ.ಮೀಟರ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
     ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷರಾದ ಭಾಸ್ಕರ್ ಜಿ ಕಾಮತ್,  ಸಂಸ್ಥೆಯ ನಿರ್ದೇಶಕರುಗಳಾದ ಕೊಳಿಗೆ ವಾಸಪ್ಪಗೌಡ, ಕುಮಾರಸ್ವಾಮಿ, ಪ್ರಾಂಶುಪಾಲರುಗಳಾದ ಎಸ್. ವಿ. ಗುರುರಾಜ್, ಸುರೇಶ್ ಎಸ್. ಹೆಚ್. ದಿವ್ಯ ಕರಣಂ, ಗಿರೀಶ್, ವಾಲಿಬಾಲ್ ಸಂಸ್ಥೆಯ ಉಪಾಧ್ಯಕ್ಷ ಪ್ರಸನ್ನ ಕುಮಾರ್, ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆಯ ಖಜಾಂಚಿ, ಉದಯ್, ಚಾಲೆಂಜರ್ಸ್ ಕ್ಲಬ್ ನ ಕಾರ್ಯದರ್ಶಿ ಯಶವಂತ್ ನಾಯ್ಕ್ ಇನ್ನು ಮುಂತಾದವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.