ಸಚಿವರಾದ ಮಧು ಬಂಗಾರಪ್ಪ ಹೆಸರಿನಲ್ಲಿ ವರ್ಗಾವಣೆ ದಂಧೆ: ವಂಚಿಸುತ್ತಿದ್ದ ಆರೋಪಿ ಬಂದನ: ಎಸ್ಪಿ ಏನಂದ್ರು ವಿಡಿಯೋ ನೋಡಿ
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಸರ್ಕಾ ರಿ ನೌಕರರಿಗೆ ವರ್ಗಾವಣೆ ಮಾಡಿಸಿಕೊಡುವುದಾಗಿ ವಂಚಿಸುತ್ತಿದ್ದ ಆರೋಪಿಯನ್ನು ಶಿವಮೊಗ್ಗದ ಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ರಘುನಾಥ್ ಎಂದು ಗುರುತಿಸ ಲಾಗಿದೆ.
ಕಳೆದ ಆರು ತಿಂಗಳಿಂದ ರಘುನಾಥ್ ತಾನು ಸಚಿವಮಧು ಬಂಗಾರಪ್ಪ ಅವರ ಆಪ್ತ ಸಹಾಯಕ(ಪಿ.ಎ.) ಎಂದುಹೇಳಿ ಕೊಂಡು ಸರ್ಕಾರಿ ನೌಕರರಿಗೆ ವರ್ಗಾವಣೆ ಹಾಗೂ ಸಾರ್ವ ಜನಿಕರಿಗೆ ಸರ್ಕಾರಿ ಕೆಲಸ ಕೊಡಿ ಸುವುದಾಗಿ ನಂಬಿಸಿ ಹಣ ವಸೂಲಿ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.
ಈತ ಕಾಂಗ್ರೆಸ್ನ ಎನ್ ಎಸ್ ಯುಐನ ಮುಖಂಡ ಎಂದು ಹೇಳಿಕೊಂಡಿದ್ದಾನೆ ಎನ್ನಲಾಗಿದೆಯಾದರೂ ಪಕ್ಷದ ಮೂಲಗಳ ಪ್ರಕಾರ ಈತ ಕಾಂಗ್ರೆಸ್ ಕಾರ್ಯಕರ್ತನಲ್ಲ ಎಂದು ತಿಳಿದುಬಂದಿದೆ.
ಈತನ ಬಗ್ಗೆ ಮೊದಲು ಸಚಿವರ ವಿಶೇಷ ಅಧಿಕಾರಿ ಶ್ರೀಪತಿ ಅವರಿಗೆ ಮಾಹಿತಿ ಸಿಕ್ಕಿದೆ. ಈ ಬಗ್ಗೆ ಅವರು ವಿಚಾರಿಸುತ್ತಿರುವಾಗಲೇ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಭಾರತಿಯವರಿಗೆ ಆರೋಪಿ ಕರೆ ಮಾಡಿ ನಿಮಗೆ ವರ್ಗಾವಣೆಯಾಗಿದ್ದು ಪ್ಲೇಸ್ ತೋರಿಸಿಲ್ಲ.
ಮಹಿಳಾ ವಿಷಯ ಈ ಬಗ್ಗೆ ಸಚಿವರ ಜೊತೆ ಮಾತನಾಡಿ ನಾನು ನಿಮ್ಮ ಕೆಲಸ ಮಾಡಿಕೊಡುವುದಾಗಿ ಹೇಳಿದ್ದ. ಆದರೆ ಅಧಿಕಾರಿ ಅನುಮಾನಗೊಂಡು ಶ್ರೀಪತಿಯವರಿಗೆ ತಿಳಿಸಿದ್ದಾರೆ. ಅಲ್ಲದೆ ಭಾರತಿ ಅವರು ಆರೋಪಿಯ ಮೊಬೈಲ್ ಸಂಖ್ಯೆಯನ್ನು 'ಟೂಕಾಲರ್'ನಲ್ಲಿ ಪರಿಶೀಲಿಸಿದ್ದಾರೆ.
ಬಳಿಕ ಈ ರಘುನಾಥ್ ಸಚಿವರ ಪಿ.ಎ. ಅಲ್ಲ ಎಂಬುದು ಸ್ಪಷ್ಟವಾಗುತ್ತಿದ್ದಂತೆ, ಕಾಂಗ್ರೆಸ್ ಮುಖಂಡ ಗಿರೀಶ್ ಅವರ ಮೂಲಕ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ರಘುನಾಥ್ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಈತನ ಬಗ್ಗೆ ಪೊಲೀಸರಿಗೆ ಇನ್ನಷ್ಟು ಅನುಮಾನವಿದ್ದು ವಿಚಾರಣೆ ನಡೆಸ್ತಿದ್ದಾರೆ.
Leave a Comment