ಆ.29ರಿಂದ 31ರವರೆಗೆ 355ನೇ ಆರಾಧನಾ ಮಹೋತ್ಸವ: ದುರ್ಗಿಗುಡಿ ರಾಯರ ಮಠದಲ್ಲಿ ವಿಶೇಷ ಪೂಜೆ
ಶಿವಮೊಗ್ಗ: ನಗರದ ದುರ್ಗಿಗುಡಿ - ತಿಲಕ್ ನಗರದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ, ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ ಭಕ್ತಿಭಾವದಿಂದ ನಡೆಯಲಿದೆ.
ಆಗಸ್ಟ್ 29ರಿಂದ 31ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಆರಾಧನಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನೆರವೇರಲಿವೆ.
ಮೂರು ದಿನಗಳೂ ಬೆಳಿಗ್ಗೆಯಿಂದಲೇ ಅಷ್ಟೋತ್ತರ ಪಾರಾಯಣ, ಕ್ಷೀರಾಭಿಷೇಕ, ಪಂಚಾಮೃತ ಸೇವೆ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ನಡೆಯಲಿವೆ.
ಆರಾಧನಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಬೆಳ್ಳಿ ರಥೋತ್ಸವ ಹಾಗೂ ಮಹಾರಥೋತ್ಸವ ಆಯೋಜಿಸಲಾಗಿದೆ.
ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುರಾಯರ ದರ್ಶನ ಪಡೆಯಲಿದ್ದಾರೆ.
ಇನ್ನು ವಿಶೇಷವೆಂದರೆ, ಈ ಬಾರಿ ಶ್ರೀ ರಾಘವೇಂದ್ರ ಸ್ವಾಮಿಗಳಿಗೆ ಚಿನ್ನದ ಕವಚ ಹಾಗೂ ಬೆಳ್ಳಿಯ ದಶಾವತಾರ ಹಾರ ಅಲಂಕರಿಸಲಾಗುತ್ತಿದೆ. ಮೂರು ದಿನಗಳ ಕಾಲ ಭಕ್ತರಿಗೆ ವಿಶೇಷ ದರ್ಶನದ ಅವಕಾಶ ಇರಲಿದೆ.
ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ಅನ್ನದಾಸೋಹ ಕೂಡ ನಡೆಯಲಿದ್ದು, ಭಕ್ತರ ಅನುಕೂಲಕ್ಕಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.
ಹೀಗಾಗಿ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ವಿವಿಧ ಭಾಗಗಳಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದ್ದು, ಆರಾಧನಾ ಮಹೋತ್ಸವ ಭಕ್ತಿಭಾವದೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ.
ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಕೃಪೆಗೆ ಪಾತ್ರರಾಗಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ವತಿಯಿಂದ ಮನವಿ ಮಾಡಲಾಗಿದೆ.
ಇಂತಹ ಧಾರ್ಮಿಕ, ಸಾಮಾಜಿಕ ಹಾಗೂ ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳಿಗಾಗಿ ‘ಹಲೋ ಶಿವಮೊಗ್ಗ’ ಸಬ್ಸ್ಕ್ರೈಬ್ ಮಾಡಿ,
ಹಲೋ ಶಿವಮೊಗ್ಗ – ನಿಮ್ಮೂರಿನ ಸುದ್ದಿ, ನಿಮ್ಮ ಧ್ವನಿ.

Leave a Comment